Latest

ಡಿ.ಕೆ.ಶಿವಕುಮಾರ್ ಕೆಣಕಿದ ಬಿಜೆಪಿ

ತಾಕತ್ತಿದ್ದರೆ ತಮಿಳುನಾಡು ಸಿಎಂ ಮನವೊಲಿಸಿ ಸುಪ್ರೀಂನಲ್ಲಿನ ದಾವೆ ವಾಪಸ್ ತೆಗೆಸಿ, ಪುಡಿ ರೌಡಿಯಂತೆ ವರ್ತಿಸಿ ರೌಡಿ ಕೊತ್ವಾಲನ ಶಿಷ್ಯ ಎಂಬುದನ್ನು ತೋರಿಸುತ್ತಿದ್ದೀರಾ ಎಂದು ಬಿಜೆಪಿ ಕೆಣಕಿದೆ

 

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು:  ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯಲು ರಾಜ್ಯ ಗೃಹ ಸಚಿವರು ಇನ್ನೊಂದು ಜನ್ಮ ಎತ್ತಿಬರಬೇಕು, ತಾಕತ್ತಿದ್ದರೆ ತಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಖಟುವಾದ ಶಬ್ದಗಳಲ್ಲಿ ಬಿಜೆಪಿ ಕೆಣಕಿದೆ.

ಪುಡಿ ರೌಡಿಯಂತೆ ವರ್ತಿಸಿ ರೌಡಿ ಕೊತ್ವಾಲನ ಶಿಷ್ಯ ಎಂಬುದನ್ನು ತೋರಿಸುತ್ತಿದ್ದೀರಾ ಎಂದು ಪ್ರಶ್ನಿಸಿದೆ. ತಾಕತ್ತಿದ್ದರೆ ತಮಿಳುನಾಡು ಸಿಎಂ ಮನವೊಲಿಸಿ ಸುಪ್ರೀಂನಲ್ಲಿನ ದಾವೆ ವಾಪಸ್ ತೆಗೆಸಿ ಎಂದು ಸವಾಲೆಸೆದಿದೆ.

ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಬಿಜೆಪಿ, ಡಿ.ಕೆ.ಶಿಯವರೇ ಮೇಕೆದಾಟು ಯೋಜನೆ ಹೆಸರಲ್ಲಿ ಪಾದಯಾತ್ರೆ ಮೂಲಕ ಸುಳ್ಳಿನ ಜಾತ್ರೆ ಮಾಡುತ್ತಿದ್ದೀರಾ? ಹತ್ತಾರು ಪ್ರಶ್ನೆ ಎತ್ತುವ ಮುನ್ನ ನಮ್ಮ ಒಂದು ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಯಾರು? ಯಾರು ಅರ್ಜಿ ಸಲ್ಲಿಸಿದ್ದಾರೋ ಆ ಸರ್ಕಾರದೊಂದಿಗೆ ತಮಿಳುನಾಡಿನಲ್ಲಿ ಕಾಂಗ್ರೆಸ್ ಚುನಾವಣಾ ಪೂರ್ವ ಹಾಗೂ ಚುನಾವಣೋತ್ತರ ಮೈತ್ರಿಯಲ್ಲಿದೆ. ಸೋನಿಯಾ ಗಾಂಧಿ ಕುಮ್ಮಕ್ಕಿನಿಂದ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಡಿಎಂಕೆ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವಾಗ ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಯಾರ ವಿರುದ್ಧ? ಎಂದು ಪ್ರಶ್ನಿಸಿದೆ.

ಡಿಕೆಶಿಯವರೇ ಮೇಕೆದಾಟು ಈಗ ತಮಿಳುನಾಡು ಸಿಎಂ ಸ್ಟ್ಯಾಲಿನ್ ಅಂಗಳದಲ್ಲಿದೆ. ನೀವು ಸುಳ್ಳಿನ ಜಾತ್ರೆ ಮಾಡುವ ಬದಲು ಅವರೊಂದಿಗೆ ಮಾತುಕತೆ ನಡೆಸಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಿ ಎಂದು ಸವಾಲು ಹಾಕುವ ಬದಲು ಸಿದ್ದರಾಮಯ್ಯ ಹಾಗೂ ನೀವು ಇಬ್ಬರೂ ಸೇರಿ ಸ್ಟ್ಯಾಲಿನ್ ಮನವೊಲಿಸಿ ಸುಪ್ರೀಂ ನಲ್ಲಿ ಸಲ್ಲಿಸಿರುವ ದಾವೆ ವಾಪಸ್ ತೆಗೆಸಿ ಎಂದು ಮರು ಸವಾಲು ಹಾಕಿದೆ.

ಸಚಿವ ಆರ್.ಅಶೋಕ್ ಗೆ ಕೊರೊನಾ ಪಾಸಿಟಿವ್; ಆಸ್ಪತ್ರೆಗೆ ದಾಖಲಾದ ಕಂದಾಯ ಮಂತ್ರಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button