Belagavi NewsBelgaum NewsKannada NewsKarnataka NewsLatest

*ಎಂಇಎಸ್ ಮುಖಂಡ ಶುಭಂ ಸೇಳಕೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ರಾಜ್ಯೋತ್ಸವದ ವಿರುದ್ಧವಾಗಿ ಅನುಮತಿ ಇಲ್ಲದೆ ಕರಾಳ‌ ದಿನಾಚರಣೆ ನಡೆಸಿ ಪುಂಡಾಟ ಮೆರೆದಿದ್ದ ಎಂಇಎಸ್ ಮುಖಂಡ ಶುಭಂ ಸೇಳಕೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಗೋವಾವೇಸ್ ಸರ್ಕಲ್ ಬಳಿ ಶುಭಂ ಸೇಳಕೆಯನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Home add -Advt

ಗೋವಾದತ್ತ ಪರಾರಿಯಾಗುತ್ತಿದ್ದ ಶುಭಂನನ್ನು ಸಿನಿಮಾ ಸ್ಟೈಲ್ ನಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಭಾಷಾ ಸಾಮರಸ್ಯ, ಶಾಂತಿ ಭಂಗ ಸೇರಿದಂತೆ ಶುಭಂ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button