Politics

*ಸುಗ್ರೀವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು*

ಪ್ರಗತಿವಾಹಿನಿ ಸುದ್ದಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ತಣ್ಣೀರೆರಚಿದ್ದಾರೆ. ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ್ದಾರೆ.

ಹಲವು ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣುತ್ತಿಲ್ಲ. ಇರುವ ಕಾನೂನುಗಳಲ್ಲಿಯೇ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button