Kannada NewsKarnataka NewsLatest

ಮಧ್ಯರಾತ್ರಿ ಮಹಿಳಾ ಅಧಿಕಾರಿಯ ರೌದ್ರಾವತಾರ: ಬಾಲ ಮುದುಡಿಕೊಂಡ ಎಂಇಎಸ್ ಫುಂಡರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸದಾ ಕಿರಿಕ್ ಮಾಡುತ್ತ ಕನ್ನಡಿಗರನ್ನು ಕೆಣಕುವ ಮಹಾರಾಷ್ಟ್ರ ಏಕೀಕರಣ ಸಮಿತಿ ಫುಡರಿಗೆ ಭಾನುವಾರ ಮಧ್ಯರಾತ್ರಿ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ಪಾಠ ಕಲಿಸಿದ್ದಾರೆ.

ಗಣೇಶ ವಿಸರ್ಜನೆ ಸ್ಥಳದಲ್ಲಿ ಕನ್ನಡದಲ್ಲಿ ಮಾತ್ರ ಬ್ಯಾನರ್ ಹಾಕಿದ್ದರಿಂದ ಎಇಎಸ್ ಫುಂಡರು ಗಲಾಟೆ ಶುರು ಮಾಡಿದರು. ಈ ವೇಳೆ ಅವರನ್ನು ಶಾಂತವಾಗಿಯೇ  ಸಮಾಧಾನಪಡಿಸಲು ಪಾಲಿಕೆಯ ಉಪಾಯುಕ್ತೆ ಲಕ್ಷ್ಮಿ ನಿಪ್ಪಾಣಿಕರ್ (ಸುಳಗೆಕರ್) ಪ್ರಯತ್ನಿಸಿದರು. ಆದರೆ ಇದರಿಂದ ಅವರ ಪುಂಡಾಟಿಕೆ ನಿಲ್ಲುವ ಬದಲು ಮತ್ತಷ್ಟು ಜೋರಾಯಿತು. ಅಧಿಕಾರಿಗೆ ಬೆದರಿಕೆ ಹಾಕುವ ಹಂತಕ್ಕೂ ಹೋದರು.

Home add -Advt

ಇದರಿಂದಾಗಿ ಕೆಂಡಾಮಂಡಲವಾದ ಲಕ್ಷ್ಮಿ ನಿಪ್ಪಾಣಿಕರ್ ರೌದ್ರಾವತಾರವನ್ನೇ ತಾಳಿದರು. ಯಾರು ಬರುತ್ತೀರೋ ಬನ್ನಿ ನೋಡೇ ಬಿಡುವೆ ಎಂದು ಕೆರಳಿ ಕೆಂಡವಾದರು. ತಮ್ಮತ್ತ ನುಗ್ಗಿ ಬರುತ್ತಿದ್ದ ಗೂಂಡಾಗಳ ಮೇಲೆಯೇ ಏರಿ ಹೋದರು. ಮಹಿಳಾ ಅಧಿಕಾರಿ ಗರಂ ಆಗಿದ್ದನ್ನು ಕಂಡ ಗೂಂಡಾಗಳು ತಂಡಾದರು. ಇವರೆದುರು ತಮ್ಮ ಆಟ ನಡೆಯುವುದಿಲ್ಲ ಎಂದು ಬಾಲ ಮುದುಡಿಕೊಂಡರು.

ಅಧಿಕಾರಿಯೊಬ್ಬರು,. ಅದರಲ್ಲೂ ಮಹಿಳಾ ಅಧಿಕಾರಿಯೊಬ್ಬರು ಸದಾ ಕಿರಿಕ್ ಮಾಡುವ ಪುಂಡರಿಗೆ ಸರಿಯಾಗಿಯೇ ಪಾಠ ಕಲಿಸಿದರು.

ಎಸಿಪಿ ನಾರಾಯಣ ಬರಮನಿ ನೇತೃತ್ವದ ಪೊಲೀಸರ ತಂಡ ಎಂಇಎಸ್  ಪುಂಡರನ್ನು ಅಲ್ಲಿಂದ ಹಿಮ್ಮೆಟ್ಟಿತು.

ಈಚೆಗೆ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೇಳ ಹೆಸರಿಲ್ಲದಂತಾಗಿರುವ ಎಂಇಎಸ್ ಹೇಗಾದರೂ ಅಸ್ಥಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಮಹಾರಾಷ್ಟ್ರ ಸರಕಾರವನ್ನು ಬಳಸಿಕೊಂಡು ಕಿರಿಕ್ ಮಾಡಲೂ ಪ್ರಯತ್ನಿಸುತ್ತಿದೆ. ಆದರೆ ಬೆಳಗಾವಿಯ ಜನರು ಜಾಗ್ರತರಾಗಿದ್ದಾರೆ.

ಸರ್ಕಾರಿ ಕಚೇರಿಯಲ್ಲಿ ದುಷ್ಕರ್ಮಿ ಅಟ್ಟಹಾಸ; ಮೂವರು ಮಹಿಳೆಯರ ಮೇಲೆ ತಲ್ವಾರ್ ನಿಂದ ದಾಳಿ

Related Articles

Back to top button