Kannada NewsKarnataka NewsLatest

*BREAKING NEWS: ರಾಜ್ಯದ ಜನರಿಗೆ ಬಿಗ್ ಶಾಕ್; ಹಾಲಿನ ದರ ಏರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದ ಜನರಿಗೆ ಹಾಲಿನ ದರ ಏರಿಕೆ ಶಾಕ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಾಲಿನ ದರ ಏರಿಕೆಗೆ ನಿರ್ಧರಿಸಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಾಲು ಒಕ್ಕೂಟಗಳ ಹಾಗೂ ಕೆ ಎಂ ಎಫ್ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಪರಿಷ್ಕೃತ ದರ ಆಗಸ್ಟ್ 1ರಿಂದ ಜಾರಿಗೆ ಬರಲಿದೆ.

Home add -Advt

ನಂದಿನಿ ಹಾಲಿನ ದರ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆ ಎಂ ಎಫ್ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲು ಸರ್ಕಾರ ಸಮ್ಮತಿ ನೀಡಿದೆ.


Related Articles

Back to top button