Kannada NewsKarnataka NewsLatest

*ಹಾಲಿನ ದರ ಏರಿಕೆ; ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಹಾಲಿನ ದರ ಏರಿಕೆಗೆ ಹಾಲು ಒಕ್ಕೂಟಗಳಿಂದ ಒತ್ತಾಯ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಎಲ್ಲಾ ಹಾಲು ಒಕ್ಕೂಟಗಳ ನಿರ್ದೇಶಕ ಜೊತೆ ಸಿಎಂ ಸಿದ್ದರಾಮಯ್ಯ ಇಂದು ಸಭೆ ನಡೆಸಲಿದ್ದಾರೆ. ನಂದಿನಿ ಹಾಲು, ಮೊಸರು ದರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಹಾಲು ಒಕ್ಕೂಟ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಏರಿಕೆ ಮಾಡುವಂತೆ ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಹೊರ ಬೀಳಲಿದೆ.


Home add -Advt

Related Articles

Back to top button