Latest

ಕೆಎಸ್ ಆರ್ ಟಿಸಿ ಬಸ್-ಲಾರಿ ನಡುವೆ ಡಿಕ್ಕಿ; 14 ಪ್ರಯಾಣಿಕರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ.

ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬಸ್ ನ ಮುಂಭಾಗ ಸಂಪೂರ್ನ ನುಜ್ಜುಗುಜ್ಜಾಗಿದೆ. ಬಸ್ ನಲ್ಲಿದ್ದ 14 ಪ್ರಯಾಣಿಕರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

Home add -Advt

ಗಾಯಾಳುಗಳನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನಾಹೊಸಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನಿದಿ ಪರಿಶೀಲನೆ ನಡೆಸಿದ್ದಾರೆ.

ಎಂಜಿಎಂ ಕಂಪನಿ ಮೇಲೆ ಐಟಿ ದಾಳಿ

Related Articles

Back to top button