Belagavi NewsBelgaum NewsKannada NewsKarnataka NewsLatest

*ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಬಹಿರಂಗ ಪಡಿಸಿ : ಲಕ್ಷ್ಮೀ ಹೆಬ್ಬಾಳಕರ್ ಸವಾಲು*

​*ದುರ್ಗಾದೇವಿ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

​ 

ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* ​: ನವರಾತ್ರಿ ಪ್ರಯುಕ್ತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸ-ಕುಟುಂಬ ಸಮೇತ ಬೆಳಗಾವಿಯ ಗ್ರಾಮ ದೇವತೆ ಶ್ರೀ ಮಿಲಿಟರಿ ದುರ್ಗಾದೇವಿಯ ಮಂದಿರಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ದೇವರ ದರ್ಶನದ ಬಳಿಕ​ ಮಾತನಾಡಿದ ಸಚಿವರು, ನವರಾತ್ರಿ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದುರ್ಗಾದೇವಿ ದರ್ಶನ ಪಡೆದು; ನಾಡಿನ  ಜನರಿಗೆ ಒಳ್ಳೆಯದಾಗಲಿ; ರೈತರಿಗೆ ಹೆಚ್ಚು ಅನುಕೂಲವಾಗಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದೆ ಎಂದು ಸಚಿವರು ಮಾಧ್ಯಮಗಳಿಗೆ ತಿಳಿಸಿದರು.

​ಭಾರತೀಯರ ಹಬ್ಬ-ಹರಿದಿನಗಳು ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ. ನಮ್ಮದು ಸಾಂಸ್ಕೃತಿಕವಾಗಿ ಶ್ರೀಮಂತ ದೇಶವಾಗಿರುವುದರಿಂದ ಇಡೀ ವಿಶ್ವವೇ ಭಾರತವನ್ನು ಅನುಕರಣೆ ಮಾಡುತ್ತಿದೆ. ಭಾರತದಲ್ಲಿ ಆಚರಣೆ ಮಾಡುವಷ್ಟು ಹಬ್ಬಗಳನ್ನು ಬೇರಲ್ಲೂ ಮಾಡುವುದಿಲ್ಲ. ನವರಾತ್ರಿ ಸೇರಿದಂತೆ ಎಲ್ಲ ಹಬ್ಬಗಳನ್ನು ನಮ್ಮ ಜನರು ಅತ್ಯಂತ ವಿಜೃಂಭರಣೆಯಿಂದ ಆಚರಿಸುತ್ತಾರೆಂದು ಸಚಿವರು ತಿಳಿಸಿದರು.

ಈ ಬಾರಿ ಮೈಸೂರಿಗೆ ಮಹಿಳಾ ದಸರಾ ಉದ್ಘಾಟನೆಗೆ ಹೋಗಲು ಸಾಧ್ಯವಾಗಲಿಲ್ಲ. ಕ್ಷೇತ್ರದಲ್ಲಿ ಸಾಕಷ್ಟು ಕಾರ್ಯಕ್ರಮಗಳು ಇರುವುದರಿಂದ ಇಂದು ತೆರಳಲು ಆಗಲಿಲ್ಲ. ರವಿವಾರ ಮೈಸೂರಿಗೆ ಹೋಗುತ್ತೇನೆ. ದಸರಾ ಫ್ಯಾಷನ್ ಶೋ ಉದ್ಘಾಟನಾ ಕಾರ್ಯಕ್ರಮದಲ್ಲಿ  ಭಾಗವಹಿಸುವುದಾಗಿ ಸಚಿವರು ಹೇಳಿದರು.

ಗೃಹಲಕ್ಷ್ಮೀ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು, ಯಜಮಾನಿಯರ ಖಾತೆಗೆ ಈ ತಿಂಗಳ 7 ಮತ್ತು 9ರಂದು ಪ್ರತ್ಯೇಕವಾಗಿ ಎರಡು ತಿಂಗಳ ಹಣ ಜಮಾ ಆಗಲಿದೆ ಎಂದು ​ತಿಳಿಸಿದರು.

​  ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಾಕುವುದು ತಡವಾಗಿತ್ತು. ಹಾಗಾಗಿ, ಈಗ ಒಂದೇ ಬಾರಿ ಎರಡು ತಿಂಗಳ ಹಣವನ್ನು ಜಮಾ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ. ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲೆಂದು ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.  

​ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ; ನಮ್ಮ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಈಡೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಪಟ್ಟು ಹಿಡಿದು ಯೋಜನೆಯನ್ನು ಜಾರಿಗೆ ತರಲಾಗಿದೆ. ಇಂದು ಯೋಜನೆಯು ಅಸಂಖ್ಯಾತ ತಾಯಿಂದಿರ ಬದುಕಿಗೆ ಆಸರೆ ಆಗಿರುವುದು ಸಂತಸ ತಂದಿದೆ ಎಂದರು.

*ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ*

ಬೆಳೆಗಾವಿಯ ಪ್ರಭಾವಿ ಸಚಿವರೊಬ್ಬರು ಭೂ ಕಬಳಿಕೆ ಮಾಡಿದ್ದಾರೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಕುಡಚಿ ಮಾಜಿ ಶಾಸಕ ಪಿ. ರಾಜೀವ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ತಿರುಗೇಟು ನೀಡಿದರು.

​ 

​ 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button