Belagavi NewsBelgaum NewsKannada NewsKarnataka NewsNationalPolitics

*62 ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ, ಕ್ಲರ್ಕ್/ಕ್ಲರ್ಕ್ ಕಂ. ಡಾಟಾ ಎಂಟ್ರಿ ಆಪರೇಟರುಗಳ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಆಂತರಿಕ ನೇಮಕಾತಿ ಹೊಂದಿರುವ 62 ಸಿಬ್ಬಂದಿಗಳಿಗೆ ಸೋಮವಾರ (ಜು.13) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿತರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು, ಸದರಿ ಆಂತರಿಕ ನೇಮಕಾತಿಗಳು ಪಾರದರ್ಶಕತೆಯಿಂದ ಜರುಗಿಸಲಾಗಿದೆ. ಈ ನೇಮಕಾತಿಗಳಿಗೆ ಕಳೆದ ಎರಡು ತಿಂಗಳುಗಳಿಂದ ಪ್ರಕ್ರಿಯೆ ಜರುಗಿಸಿ ಸಂಬಂಧಿಸಿದ ಎಲ್ಲ ಸಿಬ್ಬಂದಿಗಳ ದಾಖಲೆಗಳನ್ನು ಕುಲಂಕಷವಾಗಿ ಪರಿಶೀಲಿಸಿ 62 ಜನರಿಗೆ ನೇಮಕಾತಿ ಪತ್ರ ವಿತಿರಿಸಲಾಗಿದೆ. ಮುಂದಿನ ದಿನಗಳಲ್ಲಿ ನಿರಂತರವಾಗಿ ಮುಂಬಡ್ತಿ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ರಾಜು(ಆಸೀಫ್) ಸೇಠ, ವಾ.ಕ.ರ.ಸಾರಿಗೆ ಸಂಸ್ಥೆ ಉಪಾಧ್ಯಕ್ಷರಾದ ಸುನೀಲ ಹನುಮಣ್ಣವರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ ಪಂಚಾಯತ ರಾಜ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Home add -Advt

Related Articles

Back to top button