Belagavi NewsBelgaum NewsKannada NewsKarnataka News

*ಕಿಡಿಗೇಡಿಗಳಿಂದ ತಲ್ವಾರ್ ದಾಳಿ: ಬಾಲಕನಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮೊಹರಂ ಮೆರವಣಿಗೆ ಮುಗಿದ ಮೇಲೆ ಕಿಡಿಗೇಡಿಗಳು ತಲ್ವಾರ್ ನಿಂದ ಮಾರಣಾಂತಿಕ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಓರ್ವ ಬಾಲಕನಿಗೆ ಗಂಭೀರ ಗಾಯಗಳಾಗಿವೆ. 

ಈ ಘಟನೆ ಬೆಳಗಾವಿ ನಗರದ ಕಸಾಯಿ ಗಲ್ಲಿಯಲ್ಲಿ ನಡೆದಿದೆ. ಘಟನೆಯಲ್ಲಿ ರೆಹಾನ್ ಅಸ್ಲಮ್ ಮುಜಾವರ್ (16) ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.

ಇನ್ನು ಘಟನೆ ನಡೆಯುತ್ತಿದ್ದಂತೆ ಪೊಲೀಸ್‌ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ ಮತ್ತು ಡಿಸಿಪಿ ನಾರಾಯಣ ಬರಮನಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಈ ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

Home add -Advt

Related Articles

Back to top button