Kannada NewsKarnataka NewsLatest

*ಗನ್ ಜೊತೆ ಆಟವಾಡುತ್ತಿದ್ದ ಬಾಲಕನಿಗೆ ಮಿಸ್ ಫೈರ್; ಗುಂಡೇಟು ತಗುಲಿ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಏರ್ ಗನ್ ಜೊತೆ ಆಟವಾಡುತ್ತಿದ್ದ ಬಾಲಕ ಗನ್ ಮಿಸ್ ಫೈರ್ ಆಗಿ ಗುಂಡೇಟು ತಗುಲಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯಲ್ಲಿ ನಡೆದಿದೆ.

ಪೋಷಕರ ಬೇಜವಾಬ್ದಾರಿಗೆ ಹೆತ್ತ ಮಗು ಬಲಿಯಾದಂತಾಗಿದೆ. ಮಿಸ್ ಫೈರ್ ಆಗಿ ಗುಂಡೇಟು ಮಗುವಿನ ದೇಹದೊಳಗೆ ಹೊಕ್ಕಿದೆ. 7 ವರ್ಷದ ಬಾಲಕ ವಿಷ್ಣು ಮೃತ ದುರ್ದೈವಿ.

ಕಾಫಿ ತೋಟದಲ್ಲಿ ಮಂಗಗಳನ್ನು ಓಡಿದ್ಸುವ ಏರ್ ಗನ್ ಜೊತೆ ಬಾಲಕ ಮನೆ ಮುಂದೆ ಆಟವಾಡುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ಬಾಲಕ ಟ್ರಿಗರ್ ಒತ್ತಿದ್ದಾನೆ. ಪರಿಣಾಮ ಏರ್ ಗನ್ ಫೈರ್ ಆಗಿ ವಿಷ್ಣು ದೇಹಕ್ಕೆ ಹೊಕ್ಕಿದೆ.

ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button