Karnataka NewsLatest

*ಶಾಸಕರ ಮಗನ ಹತ್ಯೆಗೆ ಜೈಲಿನಿಂದಲೇ ಸ್ಕೆಚ್: ಹಂತಕರ ಪ್ಲಾನ್ ಬಯಲು*

ಪ್ರಗತಿವಾಹಿನಿ ಸುದ್ದಿ: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವರಾಜು ಹತ್ಯೆಗೆ ಸಂಚು ರೂಪಿಸಿರುವ ಘಟನೆ ಬಯಲಾಗಿದ್ದು, ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಡಿಚ್ಚಿ ಮುಬಾರಕ್, ಟಿಪ್ಪು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಾಸಕರ ಆಪ್ತರೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಚ್ಚಿ ಮುಬಾರಕ್ ಎಂಬಾತ ಜೈಲಿನಲ್ಲೇ ಕುಳಿತು ಬಸವರಾಜು ಹತ್ಯೆಗೆ ಸಂಚು ರೂಪಿಸಿದ್ದ. ಟಿಪ್ಪು ಹಾಗೂ ಗ್ಯಾಂಗ್ ಗೆ ಸುಪಾರಿ ಕೊಟ್ಟಿದ್ದ. ಭದ್ರಾವತಿ ಗಾಂಧಿ ಸರ್ಕಲ್ ಬಳಿ ಬಸವರಾಜು ನನ್ನು ಹತ್ಯೆ ಮಾಡುವಂತೆ ಹೇಳಿದ್ದ. ಟಿಪ್ಪು ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಗುತ್ತಿಗೆದಾರ ಸುನೀಲ್ ಎಂಬಾತ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related Articles

Back to top button