Latest

ಕೊಲೆ ಯತ್ನ ಆರೋಪ: JDS ಶಾಸಕನ ವಿರುದ್ಧ ದೂರು ದಾಖಲು

ಪ್ರಗತಿವಾಹಿನಿ ಸುದ್ದಿ; ತುಮಕೂರು: ತುಮಕೂರು ಗ್ರಾಮಾಂತರ ಜೆ ಡಿಎಸ್ ಶಾಸಕ ಗೌರಿ ಶಂಕರ್ ವಿರುದ್ಧ ಕೊಲೆ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.

ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಅವರ ಕೊಲೆಗೆ ಸುಪಾರಿ ನೀಡಿದ ಆರೀಓಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗೌರಿ ಶಂಕರ್, ಅವರ ಬೆಂಬಲಿಗರಾದ, ಹಿರೇಹಳ್ಳಿ ಮಹೇಶ್, ಬೊಮ್ಮನ ಹಳ್ಳಿಬಾಬು ವಿರುದ್ಧ ಕ್ಯಾತಸಂದ್ರ ಠಾಣೆಯಲ್ಲಿ ದೂರು ದಾಖಲಾಗಿದೆ.

ಗೌರಿಶಂಕರ್ ನನ್ನ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಸುರೇಶ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 1860 (120B, 506, 109, 34) ಅಡಿ ದೂರು ದಾಖಲಾಗಿದೆ.

Home add -Advt

Related Articles

Back to top button