Kannada NewsKarnataka NewsLatest

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

 

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ವರ್ಷದ 365 ದಿನವೂ ಅಭಿವೃದ್ಧಿ ಯೋಜನೆಗಳು ನಿರಂತರವಾಗಿ ನಡೆಯುತ್ತವೆ. ಯಾವುದೇ ಕಾರಣದಿಂದ ಅಭಿವೃದ್ಧಿಗೆ ತಡೆಯಾಗುವುದಿಲ್ಲ. ಹಾಗೆಯೇ ನಾನೂ ಕೂಡ 365 ದಿನವೂ, ದಿನದ 24 ಗಂಟೆಯೂ ಜನರೊಂದಿಗೆ ಇರುತ್ತೇನೆ. ಕ್ಷೇತ್ರದ ಅಭಿವೃದ್ಧಿ, ಜನರ ಯೋಗಕ್ಷೇಮ ನೋಡಿಕೊಳ್ಳುವುದರ ಹೊರತುಪಡಿಸಿ ನನಗೆ ಬೇರೆ ಕೆಲಸ ಇಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.

 

Home add -Advt

ಭಾನುವಾರ ಎಡೆಬಿಡದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಒಂದು ವಾರ ಬೆಂಗಳೂರಿನಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಪಾಲ್ಗೊಂಡು ಮರಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಇಡೀ ದಿನ ಕ್ಷೇತ್ರದಲ್ಲಿ ಸುತ್ತಾಡಿ ಅನೇಕ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ವರ್ಷದ 365 ದಿನವೂ ಅಭಿವೃದ್ಧಿ ಯೋಜನೆಗಳು ನಿರಂತರವಾಗಿ ನಡೆಯುತ್ತವೆ. ಯಾವುದೇ ಕಾರಣದಿಂದ ಅಭಿವೃದ್ಧಿಗೆ ತಡೆಯಾಗುವುದಿಲ್ಲ. ಹಾಗೆಯೇ ನಾನೂ ಕೂಡ 365 ದಿನವೂ, ದಿನದ 24 ಗಂಟೆಯೂ ಜನರೊಂದಿಗೆ ಇರುತ್ತೇನೆ. ಕ್ಷೇತ್ರದ ಅಭಿವೃದ್ಧಿ, ಜನರ ಯೋಗಕ್ಷೇಮ ನೋಡಿಕೊಳ್ಳುವುದರ ಹೊರತುಪಡಿಸಿ ನನಗೆ ಬೇರೆ ಕೆಲಸ ಇಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.
ಗ್ರಾಮೀಣ ಕ್ಷೇತ್ರದ ಜನರು ಸದಾ ನನ್ನೊಂದಿಗಿದ್ದಿದ್ದರಿಂದ ನಾನು ಶಾಸಕಿಯಾಗಿ ಯಶಸ್ವಿ ಕಾರ್ಯನಿರ್ವಹಣೆ ಮಾಡಲು ಸಾಧ್ಯವಾಗುತ್ತಿದೆ. ಹಾಗೆಯೇ ಕ್ಷೇತ್ರದ ಜನರ ಕಷ್ಟವಿರಲಿ, ಸುಖವಿರಲಿ ನಮ್ಮ ಇಡೀ ಕುಟುಂಬ ಜನರ ಜೊತೆ ಇರುತ್ತದೆ. ನೈಸರ್ಗಿಕ ವಿಕೋಪ, ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿ ಜನರು ಇದನ್ನು ಕಣ್ಣಾರೆ ಕಂಡಿದ್ದಾರೆ. ಗ್ರಾಮೀಣ ಕ್ಷೇತ್ರದ ಜನರೊಂದಿಗೆ ನಮ್ಮದು ಅವಿನಾಭಾವ ಸಂಬಂಧ. ಇದು ಸದಾ ಮುಂದುವರಿಯಲಿದೆ ಎಂದು ಹೆಬ್ಬಾಳಕರ್ ಹೇಳಿದರು.
 ಕಿಣಿಯೆ ಗ್ರಾಮದ ಸರಸ್ವತಿ ಗಲ್ಲಿಯಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಲಕ್ಷ್ಮಿ ಹೆಬ್ಬಾಳಕರ್ ಭೂಮಿ ಪೂಜೆಯನ್ನು ನೆರವೇರಿಸಿದರು. ಕ್ಷೇತ್ರದಲ್ಲಿ ನಿರಂತರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವುದಕ್ಕಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು ಶಾಸಕರನ್ನು ಆತ್ಮೀಯ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಸ್ನೇಹಲ್ ಸುತಾರ್,  ಉಪಾಧ್ಯಕ್ಷರಾದ ಮಲ್ಲಪ್ಪ ಪಾಟೀಲ, ಸರ್ವ ಸದಸ್ಯರು, ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಕುಡಚಿ, ಮಾರುತಿ ಡುಕರೆ, ವರ್ಷ ಡುಕರೆ, ವಿನಾಯಕ ಪಾಟೀಲ, ಸಂಜು ಹಣಬರ, ಭರ್ಮನಿ ಪಾಟೀಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
​ ನಂತರ, ​ಕಿ​ಣಿಯೆ ಗ್ರಾಮದ ಪಶು ಆಸ್ಪತ್ರೆಗೆ ಭೇಟಿಯನ್ನು ನೀಡಿ​ದ ಲಕ್ಷ್ಮಿ ಹೆಬ್ಬಾಳಕರ್​ ಅಲ್ಲಿನ ಕುಂದುಕೊರತೆಗಳ​ನ್ನು ಆಲಿಸಿ​ದರು. ಪಶು ಆಸ್ಪತ್ರೆಯ ಕಟ್ಟಡ ಚಿಕ್ಕದಾಗಿದ್ದು, ದೊಡ್ಡದಾಗಿ ನಿರ್ಮಾಣ ಮಾಡುವುದರ ​ಕುರಿತು​ ಗ್ರಾಮದ ಜನರ ಹಾಗೂ ಪಶು ವೈದ್ಯಾಧಿಕಾರಿ​ ಕುಲಕರ್ಣಿಯವರ ಜತೆ ಚರ್ಚಿಸಿದ​ರು​.

 

 ಕಂಗ್ರಾಳಿ ಬಿ ಕೆ ಗ್ರಾಮದಲ್ಲಿ ಕೆರೆಯ ಸೌಂದರ್ಯೀಕರಣದ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವುಗಳನ್ನು ಪರಿಶೀಲಿಸಿ, ಪ್ರಗತಿಯ ಮಾಹಿತಿ ಪಡೆದರು. ಜತೆಗೆ ಗ್ರಾಮಸ್ಥರು ಗಣೇಶ ವಿಸರ್ಜನೆಯ ಸಲುವಾಗಿ ಅನಾನುಕೂಲತೆಯನ್ನು ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ, ಗಣೇಶ ವಿಸರ್ಜನೆಯ ಸಲುವಾಗಿ ಈಗಾಗಲೇ ಪ್ರತ್ಯೇಕ ಕೆರೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಕೆರೆಯ ಕಾಮಗಾರಿಗಳ ಬಗ್ಗೆ ಜನರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದು, ಆದಷ್ಟು ಬೇಗ ಎಲ್ಲ ಕಾಮಗಾರಿಗಳು ಮುಕ್ತಾಯಗೊಳ್ಳಲಿವೆ ಎಂದು ಹೆಬ್ಬಾಳಕರ್ ಗ್ರಾಮಸ್ಥರಿಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅನಿಲ ಪಾವಸೆ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ದತ್ತಾ ಪಾಟೀಲ, ಜಯರಾಂ ಪಾಟೀಲ, ಅಡಿವೆಪ್ಪ ಹತ್ತರಗಿ, ಸದೆಪ್ಪ ರಾಜಕಟ್ಟಿ, ಗ್ರಾಮ ಪಂಚಾಯತ್ ಸದಸ್ಯೆ ಅರ್ಚನಾ ಪಾಟೀಲ, ಸಿದ್ದರಾಯಿ ಬೆಳಗಾವಿ ಹಾಗೂ​ ಕಾರ್ಯಕರ್ತರು ಉಪಸ್ಥಿತರಿದ್ದರು.
​ 
ಕ್ಷೇತ್ರದ ಕಂಗ್ರಾಳಿ ಕೆ ಎಚ್ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ಹಾಗೂ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯ ನೂತನ ಸ್ಮಾರ್ಟ್ ಕ್ಲಾಸ್ ಕಟ್ಟಡಗಳ ನಿರ್ಮಾಣದ ಕಾಮಗಾರಿಗಳಿಗೆ​ ಲಕ್ಷ್ಮಿ ಹೆಬ್ಬಾಳಕರ್  ಗುದ್ದಲಿ ಪೂಜೆಯನ್ನು ನೆರವೇರಿ​ಸಿ​ದರು.​ ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಬಾಳು ಪಾಟೀಲ, ಮನೋಹರ ಪಾಟೀಲ, ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಲತಾ ಪಾಟೀಲ, ವಿಶಾಲ ಭೋಸ್ಲೆ, ಜ್ಯೋತಿಬಾ ಪಾಟೀಲ, ವಿನಾಯಕ ಪಾಟೀಲ, ಶಾಲೆಯ ಸಿಬ್ಬಂದಿಯವರು ಮುಂತಾದವರು ಉಪಸ್ಥಿತರಿದ್ದರು​.​
 
​ಡಾ.ಅಂಬೇಡ್ಕರ್ ಭವನ ಕಟ್ಟಡದ ಕಾಲಂ ಪೂಜೆ
​ ​ ಹಂಗರಗಾ ಗ್ರಾಮದಲ್ಲಿ ​​ಡಾ.ಅಂಬೇಡ್ಕರ್ ಭವನ ಕಟ್ಟಡದ ಕಾಲಂ ಪೂಜೆಯನ್ನು​ ಭಾನುವಾರ​ ಸ್ಥಳೀಯ ಜನಪ್ರತಿನಿಧಿಗಳು​ ನೆರವೇರಿಸಿದರು. ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಅನುಪಸ್ಥಿತಿಯಲ್ಲಿ ಚನ್ನರಾಜ ಹಟ್ಟಿಹೊಳಿ ​ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು. 
ಈ ಸಂದರ್ಭದಲ್ಲಿ ಎಸ್ಸಿ ಎಸ್ಟಿ ಬ್ಲಾಕ್ ಅಧ್ಯಕ್ಷರಾದ ಮಹೇಶ ಕಿಳಕರ್, ಬಾಳು ಪಾಟೀಲ, ಬಾಲಕೃಷ್ಣ ಕಾಂಬ್ಳೆ, ನಿವೃತ್ತಿ ತಳವಾರ, ಯಲ್ಲಪ್ಪ ಪಾಟೀಲ ಹಾಗೂ ಗ್ರಾಮ ಪಂಚಾಯತಿ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related Articles

Back to top button