*ಶಾಸಕ ಮುನಿರತ್ನ ಎಸ್ಐಟಿ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜಾತಿನಿಂದನೆ, ಬೆದರಿಕೆ ಕೇಸ್‌ಗೆ ಸಂಬಂಧಪಟ್ಟಂತೆ ಹೆಚ್ಚಿನ ತನಿಖೆಗಾಗಿ ಮುನಿರತ್ನರವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಜಾತಿನಿಂದನೆ ಪ್ರಕರಣದಲ್ಲಿ ಬೇಲ್ ಸಿಕ್ಕಿದ್ದರೂ ಕೂಡಾ ಅತ್ಯಾಚಾರ ಆರೋಪದ ಕೇಸ್‌ನಲ್ಲಿ ಮತ್ತೆ ಪೊಲೀಸರ ವಶದಲ್ಲಿದ್ದ ಮುನಿರತ್ನ ಇದೀಗ ಎಸ್‌ಐಟಿ ಪೊಲೀಸರ ವಶವಾಗಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನ ಅವರನ್ನು ಬಂಧಿಸಿದ್ದರು. ನಂತರ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಪೊಲೀಸರು ಮುನಿರತ್ನ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದರು. … Continue reading *ಶಾಸಕ ಮುನಿರತ್ನ ಎಸ್ಐಟಿ ವಶಕ್ಕೆ*