Belagavi NewsBelgaum NewsPolitics
*ಶಾಸಕ ರಾಜು ಕಾಗೆ ಹಿರಿಯ ಪುತ್ರಿ ನಿಧನ*

ಪ್ರಗತಿವಾಹಿನಿ ಸುದ್ದಿ : ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಅವರ ಹಿರಿಯ ಪುತ್ರಿ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃತಿಕಾ ಪಾಟೀಲ್ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ. ನಿಪ್ಪಾಣಿ ತಾಲೂಕಿನ ನೇರ್ಲಿ ಗ್ರಾಮದ ನಿವಾಸಿ ಡಾ. ಅನಿಲ ಪಾಟೀಲ ಧರ್ಮಪತ್ನಿ ಕೃತಿಕಾ ಅವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ ಕಾಗವಾಡ ಶಾಸಕ ರಾಜು ಕಾಗೆ ಸ್ವ ಗ್ರಾಮ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ನಡೆಯಲಿದೆ.


