Karnataka NewsLatestPolitics

*ವಿಧಾನ ಪರಿಷತ್ ನೂತನ ಸದಸ್ಯೆ ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ, ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕ ಪ್ರಕಾಶ್ ಕೋಳಿವಾಡ್, ಪರಿಷತ್ ಸದಸ್ಯ ಎಸ್ ರವಿ , ಐವನ್ ಡಿ’ಸೋಜಾ, ಹೆಚ್.ಪಿ. ಸುಧಾಮದಾಸ್ ಮತ್ತಿತರರು ಉಪಸ್ಥಿತರಿದ್ದರು.

Home add -Advt

Related Articles

Back to top button