Latest

*ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಮುಂಗಾರು ಭಾರತಕ್ಕೆ ಪ್ರವೇಶ*

ಪ್ರಗತಿವಾಹಿನಿ ಸುದ್ದಿ: ಈ ಬಾರಿ ನೈಋತ್ಯ ಮುಂಗಾರು ಮಳೆ ನಿಗದಿತ ಸಮಯಕ್ಕಿಂತ ಐದು ದಿನ ಮುಂಚಿತವಾಗಿ ಭಾರತಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಾಮಾನ್ಯವಾಗಿ ನೈರುತ್ಯ ಮುಂಗಾರು ಜೂನ್ ತಿಂಗಳಲ್ಲಿ ಕೇರಳವನ್ನು ಪ್ರವೇಶಿಸುವುದು ವಾಡಿಕೆ. ಆದರೆ ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಮೇ 27 ರಂದೇ ನೈರುತ್ಯ ಮುಂಗಾರು ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆಯಿದೆ. ನಂತರ ಒಂದೆರಡು ದಿನಗಳಲ್ಲಿ ಕರ್ನಾಟಕದ ಪಶ್ಚಿಮ ಕಾರವಳಿಯನ್ನು ಮುಂಗಾರು ಪ್ರವೇಶಿಸುತ್ತದೆ.

Home add -Advt

ಕೇರಳವನ್ನು ಪ್ರವೇಶಿದ ನಂತರ ಭಾರತದ ಮುಖ್ಯ ಭೂ ಭಾಗಗಳಿಗೆ ಮಳೆ ಆಗಮಿಸುವ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುತ್ತದೆ. 

ಸಾಮಾನ್ಯವಾಗಿ ಜೂನ್ 1ಕ್ಕೆ ಕೇರಳಕ್ಕೆ ಆಗಮಿಸುವ ಮುಂಗಾರು ಮಳೆ ಜೂನ್ 8 ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಸೆಪ್ಟೆಂಬರ್ 17ರ ಸುಮಾರಿಗೆ ವಾಯುವ್ಯ ಭಾರತದಿಂದ ಮರಳಲು ಆರಂಭಿಸಿ, ಅಕ್ಟೋಬರ್ 15ರ ವೇಳೆಗೆ ಸಂಪೂರ್ಣವಾಗಿ ಹಿಂದಿರುಗಲಿದೆ.

Related Articles

Back to top button