ಕೇರಳಕ್ಕೆ ಮುಂಗಾರು ಪ್ರವೇಶ: 2 ದಿನಗಳಲ್ಲಿ ಕರ್ನಾಟಕ ಪ್ರವೇಶ

 ಪ್ರಗತಿವಾಹಿನಿ ಸುದ್ದಿ, ಧಾರವಾಡ – ಗುರುವಾರ ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ 3 ದಿನ ತಡವಾಗಿ ಮುಂಗಾರು ಪ್ರವೇಶವಾಗಿದೆ.

ಮುಂಗಾರು ಮಾರುತವು ಮುಂದುವರಿದು ಮುಂದಿನ 2 ದಿನಗಳಲ್ಲಿ ಕರ್ನಾಟಕದ ಒಳನಾಡು ಹಾಗೂ ದಕ್ಷಿಣ ಒಳನಾಡನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಧಾರವಾಡದ ಉತ್ತರ ಕರ್ನಾಟಕ ಕೃಷಿ ಹವಾಮಾನ ಮತ್ತು ಮುನ್ಸೂಚನಾ ಕೇಂದ್ರ ಹಾಗೂ ಕೃಷಿ ಹವಾಮಾನ ಶಾಸ್ತ್ರ ವಿಭಾಗ ತಿಳಿಸಿದೆ.

ಗಾಳಿಯ ಒತ್ತಡದಲ್ಲಿ ವ್ಯಾತ್ಯಾಸವಾಗಿರುವುದರಿಂದ ಜೂನ್ 3 ಮತ್ತು 4ರಂದು ಉತ್ತರಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಕೇಂದ್ರ ತಿಳಿಸಿದೆ.

ಮಳೆಯ ನಂತರದ್ ತೇವಾಂಶದ ಆಧಾರದ ಮೇಲೆ ಬಿತ್ತನೆ ಕೈಗೊಳ್ಳಲು ಸಾಮಗ್ರಿಗಳನ್ನು ಸಿದ್ಧಪಡಿಸಿಟ್ಟುಕೊಳ್ಳುವುದು ಒಳಿತು ಎಂದು ತಿಳಿಸಲಾಗಿದೆ.

Home add -Advt

ಹೆಚ್ಚಿನ ಮಾಹಿತಿಯನ್ನು ಮೇಲಿನ ಚಿತ್ರದಲ್ಲಿರುವ ನಂಬರ್ ಸಂಪರ್ಕಿಸಿ ಪಡೆಯಬಹುದು.

ಕಡ್ಡಾಯ ವರ್ಗಾವಣೆಗೊಂಡ ಶಿಕ್ಷಕರ ಪರ ಅಧಿಸೂಚನೆ ಪ್ರಕಟ; ಆಕ್ಷೇಪಣೆಗೆ 7 ದಿನ ಅವಕಾಶ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button