Kannada NewsKarnataka News

ಮದುವೆ ಊಟ ಮಾಡಿದ 30ಕ್ಕೂ ಹೆಚ್ಚು ಜನ ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿ: ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಹೆಚ್ಚು ಜನರಿಗೆ ಫುಡ್ ಪಾಯಿಸನ್ ಆಗಿದ್ದು, ಅಸ್ವಸ್ಥಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸಮೀಪದ ಕಾಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆ ಸಮಾರಂಭದಲ್ಲಿ ಶುಕ್ರವಾರ ರಾತ್ರಿ ಊಟ ಸೇವಿಸಿದ 30 ಜನ ಪುಡ್ ಪಾಯಿಸನ್ ಆಗಿದೆ. ಕೂಡಲೇ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಇಂದು ಬೆಳಗ್ಗೆ ಸಹ ಐವರಿಗೆ ಪುಡ್ ಪಾಯಿಸನ್ ಎಫೆಕ್ಟ್ ಕಂಡುಬಂದಿದ್ದು, ಅವರನ್ನು ಸಹ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲಾಸ್ಪತ್ರೆಗೆ ಮಾಯಕೊಂಡ ಶಾಸಕ ಬಸವಂತಪ್ಪ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ

Related Articles

Back to top button