Kannada NewsKarnataka NewsNational

*ಪತಿ ಕಿರುಕುಳಕ್ಕೆ ಮೂರು ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ*

ಪ್ರಗತಿವಾಹಿನಿ ಸುದ್ದಿ: ಪತಿಯ ಕಿರುಕುಳದಿಂದ ಬೇಸತ್ತು 3 ವರ್ಷದ ಮಗನ ಜೊತೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಚೆನ್ನಮ್ಮ ದೇವಿ ದೇವಸ್ಥಾನದ ಬಳಿ ನಡೆದಿದೆ. 

ತಾಯಿ ಫಾತಿಮಾ(21) ಮತ್ತು ಪುತ್ರ ಅಬ್ದುಲ್ (3) ಮೃತರು. ಮಗಳ ಸಾವಿಗೆ ಪತಿ ಮಸ್ತಾನ್​​ ಸಾಬ್ ಕಿರುಕುಳವೇ ಕಾರಣ ಎಂದು ಫಾತಿಮಾ ಪೋಷಕರು ಆರೋಪಿಸಿದ್ದಾರೆ. ಬದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

8 ವರ್ಷದ ಹಿಂದೆ ಜಮೇಲಾ ಎಂಬ ಯುವತಿಯೊಂದಿಗೆ ಮಸ್ತಾನ್​ ಸಾಬ್​​ ಮದುವೆ ಆಗಿದ್ದ. 5 ತಿಂಗಳ ಗರ್ಭಿಣಿಯಾಗಿದ್ದ ಫಾತಿಮಾಳನ್ನು ಪ್ರೀತಿಸಿ ವಿವಾಹವಾಗಿದ್ದ. 

ಇತ್ತೀಚೆಗೆ ಫಾತಿಮಾಳಿಗೆ ಪತಿ ಮಸ್ತಾನ್​ ಸಾಬ್​​ ಹೆಚ್ಚು ಕಿರುಕುಳ ನೀಡುತ್ತಿದ್ದ ಆರೋಪ ಕೂಡ ಕೇಳಿಬಂದಿದೆ. ಪತಿ ಕಿರುಕುಳದಿಂದ ಬೇಸತ್ತು ಮೂರು ದಿನ ಹಿಂದೆ ಫಾತಿಮಾ ತವರಿಗೆ ಬಂದಿದ್ದಳು. ಮಗಳು ಫಾತಿಮಾ ಸಾವಿಗೆ ಪತಿ ಕಿರುಕುಳವೇ ಕಾರಣ ಎಂದು ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ

Home add -Advt

Related Articles

Back to top button