Kannada NewsKarnataka NewsLatest
*ಕೃಷಿ ಹೊಂಡದಲ್ಲಿ ತಾಯಿ-ಮಗಳ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ತಾಯಿ ಹಾಗೂ ಮಗಳು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಇಂಡ್ರಸನಹಳ್ಲಿಯಲ್ಲಿ ನಡೆದಿದೆ.
ಮಾಲಾ ಹಾಗೂ ಮಗಳು ಅನುಶ್ರೀ ಶವವಾಗಿ ಪತ್ತೆಯಾಗಿದ್ದಾರೆ. ಮಾಲಾ ಪತಿಯೇ ಪತ್ನಿ ಹಾಗೂ ಮಗಳನ್ನು ಹತ್ಯೆ ಮಾಡಿ ಕೃಷಿ ಹೊಂಡಕ್ಕೆ ಎಸೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಜಮೀನು ಭಾಗ ಕೇಳಿದ್ದಕ್ಕೆ ಗಂಡನಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮಾಲಾ ಕುಟುಂಬದವರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.



