Latest

ಮಗನನ್ನು ನೀರಲ್ಲಿ ಮುಳುಗಿಸಿ ಕೊಂದ ತಾಯಿ

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ನೀರಿನ ಸಂಪಲ್ಲಿ 7 ವರ್ಷದ ಮಗನನ್ನು ಮುಳುಗಿಸಿಕೊಂದ ತಾಯಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೊತ್ತಪಲ್ಲಿ ಗ್ರಾಮದಲ್ಲಿ ನಡೆದಿದೆ.

ಶೋಭಾ ಮಗನನ್ನು ಕೊಂದು ತಾನೂ ಸಾವಿಗೆ ಶರಣಾದ ತಾಯಿ. 7 ವರ್ಷದ ವಿಶಾಲ್‍ ಮೃತ ಪುತ್ರ. ಮನೆಯ ಮುಂಭಾಗದ ಸಂಪಿನಲ್ಲಿ ಮಗನನ್ನ ಮುಳುಗಿಸಿ ಕೊಲೆ ಮಾಡಿರುವ ಶೋಭಾ, ಬಳಿಕ ಮನೆಗೆ ಬಂದು ಮೇಲಿನ ರೂಮಿನಲ್ಲಿ ನೇಣು ಬಿಗಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Home add -Advt

ಮಗ ವಿಶಾಲ್ ಮಾನಸಿಕ ಅಸ್ವಸ್ಥ ಹಾಗೂ ವಿಶೇಷ ಚೇತನನಾಗಿದ್ದ. ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗಿಲ್ಲ ಇದರಿಂದ ನೊಂದ ತಾಯಿ ಈ ಕೃತ್ಯ ನಡೆಸಿದ್ದಾಳೆ ಎನ್ನಲಾಗಿದೆ. ಮನೆಗೆ ಪತಿ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button