Latest

*ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ತಾಯಿ*

ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಇಲ್ಲಿನ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದ ಚಂಪಕಾಪುರದಲ್ಲಿ ಈ ದುರಂತ ಸಂಭವಿಸಿದೆ. ರಾಜೇಶ್ ಎಂಬುವವರ ಪತ್ನಿ ವಾಣಿ ತನ್ನ ಇಬ್ಬರು ಗಂಡು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Home add -Advt

ವಾಣಿ (32) ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತ ದುರ್ದೈವಿಗಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೊಸನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button