Belagavi NewsBelgaum NewsKarnataka NewsPolitics

*ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಂಸದ ಜಗದೀಶ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಗಳು ಹಾಗೂ ನೈರುತ್ಯ ವಲಯ ರೈಲ್ವೆಯ ಅಧಿಕಾರಿಗಳ ಜೊತೆಗೆ  ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ  ಜಗದೀಶ್ ಶೆಟ್ಟರ್ ಅವರು ಸಭೆ ನಡೆಸಿದರು.

ವಿಮಾನ ನಿಲ್ದಾಣದ ಅಭಿವೃದ್ಧಿ, ಭೂಸ್ವಾಧೀನ ಪ್ರಕ್ರಿಯೆ, ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಪರಿವರ್ತಿಸಲು ಅವಶ್ಯವಿರುವ ಬಗ್ಗೆ ಪರಿಶೀಲಿಸುವ ವಿಷಯಗಳು, ಬೆಳಗಾವಿ ರಿಂಗ್ ರೋಡ್, ಬೈಪಾಸ್ ರಸ್ತೆ, ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲು ನಿರ್ಮಾಣಕ್ಕೆ ಅವಶ್ಯಕವಿರುವ ಭೂಸ್ವಾಧೀನ ವಿಷಯಗಳ ಕುರಿತು ಚರ್ಚಿಸಿ, ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರೋಶನ್ ಮಹಮದ್, ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಾದ ತ್ಯಾಗರಾಜ, ಬೈಪಾಸ್ ರಸ್ತೆ ಪ್ರೊಜೆಕ್ಟ್ ನಿರ್ದೇಶಕರಾದ ಭುವನೇಶಕುಮಾರ, ನೈರುತ್ಯ ವಲಯ ರೈಲ್ವೆ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button