Belagavi NewsBelgaum NewsKannada NewsKarnataka NewsNational

*ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಂಸದ ಜಗದೀಶ್ ಶೆಟ್ಟರ್ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ಅವರು ಗೋವಾ ರಾಜ್ಯಕ್ಕೆ ಉತ್ತಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಬೆಳಗಾವಿ – ಖಾನಾಪುರ – ರಾಮನಗರ – ಅನಮೋಡ ಮಾರ್ಗವಾಗಿ ಗೋವಾ ಬಾರ್ಡರ್  ವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಹಾಗೂ ಬೆಳಗಾವಿ- ಜಾಂಬೋಟಿ – ಕಣಕೊಂಬಿ ಚೋರ್ಲಾ ಘಾಟ್ ವರೆಗೆ ಅಲ್ಫಾಲ್ಟ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತು ಅನುದಾನ ಸಹ ಬಿಡುಗಡೆಯಾಗಿದೆ. ಆದರೆ ಕಾಮಗಾರಿ ಪ್ರಾರಂಭವಾಗದೇ ಇರುವ ಬಗ್ಗೆ ಕಾರಣ ತಿಳಿಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಧಾರವಾಡ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಪ್ರಸ್ತಾಪಿತ ಎರಡು ರಸ್ತೆಗಳು ಬೆಳಗಾವಿಯಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಬಹುಮುಖ್ಯವಾದ ರಸ್ತೆಗಳಾಗಿವೆ. ವ್ಯಾಪಾರ, ವಹಿವಾಟು ಮತ್ತು ಸರಕು ಸಾಗಾಣಿಕೆಗೆ ತುಂಬಾ ಉಪಯುಕ್ತಕರ. ಆದರೆ ಇವೆರಡೂ ರಸ್ತೆಗಳು ತುಂಬಾ ಹಾಳಾದ ಹಿನ್ನೆಲೆಯಲ್ಲಿ ವಾಹನ ಸಂಚಾರ ಕುಂಠಿತಗೊಂಡಿದ್ದು, ಸಾರ್ವಜನಿಕರಿಂದ ಹಾಗೂ ವ್ಯಾಪಾರಸ್ಥರಿಂದ ಅನೇಕ ದೂರುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಅವರು ಆಯಾ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪ್ರಸ್ತಾಪಿತ ಎರಡು ರಸ್ತೆಗಳ ಕಾಮಗಾರಿಗಳನ್ನು ಕೂಡಲೇ ಆರಂಭಿಸುವಂತೆ ಸೂಚಿಸಿದರು.

Home add -Advt

ಮುಂದುವರೆದು ಬೆಳಗಾವಿ ಹುನಗುಂದ ಮಾರ್ಗವಾಗಿ ರಾಯಚೂರು ನಡುವಿನ ನಿರ್ಮಾಣ ಪ್ರಾಥಮಿಕ ಹಂತದಲ್ಲಿರುವ ರಸ್ತೆ ಕಾಮಗಾರಿಯ ಪ್ರಗತಿಯ ಬಗ್ಗೆ ವಿವರಗಳನ್ನು ಸಹ ಅಧಿಕಾರಿಗಳಿಂದ ಸಂಸದರು ಪಡೆದರು. ಸಭೆಯಲ್ಲಿ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಭುವನೇಶ್ವರ ಕುಮಾರ, ಪವನ್ ಹಾಗೂ ಭೂಸ್ವಾಧೀನ ಅಧಿಕಾರಿಗಳಾದ ರಾಜಶ್ರೀ ಜೈನಾಪೂರ, ಚೌವ್ಹಾಣ್ ಹಾಜರಿದ್ದರು.

Related Articles

Back to top button