Kannada NewsKarnataka NewsLatestPolitics

*ಸಂಸದ ಮುನಿಸ್ವಾಮಿ ಹಾಗೂ ಶಾಸಕ ನಾರಾಯಣಸ್ವಾಮಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಕೋಲಾರ ಸಂಸದ ಎಸ್.ಮುನಿಸ್ವಾಮಿ ಹಾಗೂ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ನಡುವಿನ ಸಂಘರ್ಷ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಸೆ.25ರಂದು ಜನತಾದರ್ಶನ ಕಾರ್ಯಕರಮ ವೇದಿಕೆಯಲ್ಲಿಯೇ ಇಬ್ಬರ ನಡುವೆ ಆರಂಭವಾಗದ ಜಟಾಪಟಿ ಇದೀಗ ವಿಕೋಪಕ್ಕೆ ತಿರುಗಿದೆ.

ಸಂಸದ ಮುನಿಸ್ವಾಮಿ ಹಾಗೂ ಶಾಸಕ ನಾರಾಯಣಸ್ವಾಮಿ ವಿರುದ್ಧ ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ನಾರಾಯಣಸ್ವಾಮಿ ವಿರುದ್ಧ ಬಿಜೆಪಿಯ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಬಾಲಾಜಿ ದೂರು ಸಲ್ಲಿಸಿದ್ದಾರೆ. ಮುನಿಸ್ವಾಮಿ ವಿರುದ್ಧ ಖುದ್ದು ನಾರಾಯಣಸ್ವಾಮಿಯೇ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button