Politics

*ಮುಡಾ ಅಕ್ರಮ ಪ್ರಕರಣ: ಅವರು ಹೇಳ್ತಾರೆ ಎಂದು ಸಿಬಿಐಗೆ ಕೊಡಲು ಆಗಲ್ಲ ಎಂದ ಗೃಹ ಸಚಿವ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣವನ್ನು ಸಿಬಿಐಗೆ ಕೊಡಲು ಆಗಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮುಡಾ ಅಕ್ರಮ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಪ್ರತಿಭಟನೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಜೆಪಿಯವರು ಕೇಳ್ತಾರೆ ಎಂದು ಎಲ್ಲಾ ಕೇಸ್ ಗಳನ್ನು ಸಿಬಿಐ ತನಿಖೆಗೆ ಕೊಡಲು ಆಗಲ್ಲ. ಅವರು ಹೇಳುತ್ತಾರೆ ಎಂದು ಎಲ್ಲಾ ಸಿಬಿಐಗೆ ಕೊಟ್ಟರೆ ನಾವು ಇಲ್ಲಿ ಏನೂ ತನಿಖೆ ಮಾಡಬಾರದೇ? ಎಂದು ಗರಂ ಆದರು.

ಮುಡಾ ಪ್ರಕರಣವನ್ನು ಸಿಬಿಐಗೆ ಕೊಡುವ ಪ್ರಶ್ನೆ ಇಲ್ಲ. ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಕೂಡ ಸ್ಪಷ್ಟಪಡಿಸಿದ್ದಾರೆ ಎಂದರು.

ಇನ್ನು ಈ ವಿಚಾರವಾಗಿ ಬಿಜೆಪಿ ಸದನದಲ್ಲಿ ಪ್ರಸ್ತಾಪ ಮಾಡುವುದಾಗಿ ಹೇಳಿರುವ ಬಗ್ಗೆ, ಬಿಜೆಪಿಯವರು ಸದನದಲ್ಲಿ ಚರ್ಚಿಸಲಿ. ನಾವೂ ಕೂಡ ಅವರಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button