LatestPolitics

*ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಮತ್ತಷ್ಟು ಬಿಗಿ ಪೊಲೀಸ್ ಭದ್ರತೆ: ಎಲ್ಲೆಡೆ ಕಟ್ಟೆಚ್ಚರ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತೀರ್ಪು ಪ್ರಕಣವಾಗಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಿಂದ ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿಗಳ ನಿವಾಸ ಕಾವೇರಿ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Home add -Advt

ಒಂದು ವೇಳೆ ಸಿಎಂ ವಿರುದ್ಧ ತೀರ್ಪು ಬಂದರೆ ಅಭಿಮಾನಿಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚ ವಹಿಸಲಾಗಿದ್ದು, ಕಾವೇರಿ ನಿವಾಸದ ಬಳಿ 2 ಕೆ ಎಸ್ ಆರ್ ಪಿ ತುಕಡಿ, ಬಿಎಂಟಿಸಿ ಬಸ್ ಗಳನ್ನು ನಿಯೋಜಿಸಲಾಗಿದೆ. ಎಲ್ಲೆಡೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Related Articles

Back to top button