Politics

*ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹನಗೇರಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆಗೆ ವಕ್ಫ್ ನೋಟಿಸ್ ಕಾರಣ. ರೈತನ ಜಮೀನಿನ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಈ ವರದಿಯನ್ನೂ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮೂಲಕ ಹಂಚಿಕೊಂಡಿದ್ದರು. ಆದರೆ ರೈತನ ಆತ್ಮಹತ್ಯೆಗೆ ಸಾಲಭಾದೆ ಕಾರಣ ಎಂದು ತಿಳಿದುಬಂದಿದೆ.

Home add -Advt

ಜಿಲ್ಲಾಡಳಿತ ಹಾಗೂ ಪೊಲೀಸರು ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಸುಳ್ಳು ಮಾಹಿತಿಯನ್ನು ಹರಡಿದ ಆರೋಪದಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.

Related Articles

Back to top button