Latest

ಭಾರಿ ಮಳೆಗೆ ಕುಸಿದ ಗೋಡೆ; 11ಕ್ಕೂ ಹೆಚ್ಚು ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಭಾರಿ ಮಳೆಯಿಂದಾಗಿ ಗೋಡೆ ಕುಸಿದ ಪರಿಣಾಮ 11 ಜನರು ಸಾವನ್ನಪ್ಪಿರುವ ಘಟನೆ ಮುಂಬೈನ ಚಂಬೂರಿನ ಭಾರತ್ ನಗರ ಪ್ರದೇಶದಲ್ಲಿ ನಡೆದಿದೆ. ಗುಡಿಸಲುಗಳ ಮೇಲೆ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ

ಮುಂಬೈ ಪಾಲಿಕೆ ಸಿಬ್ಬಂದಿ ಹಾಗೂ ಎನ್ ಡಿ ಆರ್ ಎಫ್ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಹಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ.

16 ಜನರನ್ನು ರಕ್ಷಿಸಲಾಗಿದ್ದು, ಹಲವರು ಮಣ್ಣಿನಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಎನ್ ಡಿಆರ್ ಎಫ್ ತಂಡ ತಿಳಿಸಿದೆ. ಮುಂಬೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ನಗರದ ವಿವಿಧ ಭಾಗಗಳಲ್ಲಿ 5 ಮನೆಗಳು ಕುಸಿದು ಬಿದ್ದಿವೆ. ವಿಖ್ರೋಲಿ ಉಪನಗರದಲ್ಲಿ ಭೂ ಕುಸಿತದಿಂದಾಗಿ ಐದು ಜನರು ಸಾವನ್ನಪ್ಪಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button