Karnataka News

*ಶಾಸಕ ಬಿ.ಜಿ.ಗೋವಿಂದಪ್ಪ ಕಾರು ಚಾಲಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕಾಂಗ್ರೆಸ್ ಶಾಸಕ ಬಿ.ಜಿ.ಗೋವಿಂದಪ್ಪ ಅವರ ಕಾರು ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

Home add -Advt

ಯಶವಂತ್ ಬಂಧಿತ ಕಾರು ಚಾಲಕ. ವಿವಾಹಿತ ಮಹಿಳೆ ಗಾಯಿತ್ರಿ ಎಂಬುವವರ ಜೊತೆ ಕಾರು ಚಾಲಕ ಯಶವಂತ್ ಅಕ್ರಮ ಸಂಬಂಧ ಹೊಂದಿದ್ದ. ಅಕ್ರಮ ಸಂಬಂಧಕ್ಕೆ ಗಾಯತ್ರಿ ಪತಿ ಪ್ರಸನ್ನ ಅಡ್ಡಿಯಾಗಿದ್ದಾನೆ ಎಂದು ಆತನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಯಶವಂತ್ ನನ್ನು ವಶಕ್ಕೆ ಪಡೆಯಲಾಗಿದೆ.

ಬೆನಕಲ್ ಗ್ರಾಮದ ಪ್ರಸನ್ನ ಮಾರ್ಚ್ 17ರಿಂದ ನಾಪತ್ತೆಯಾಗಿದ್ದ. ಜುಲೈ 21ರಂದು ಚಿಕ್ಕಮಗಳೂರಿನ ಲಿಂಗದಹಳ್ಳಿ ಬಳಿ ಪ್ರಸನ್ನ ಅವರ ಶವ ಪತ್ತೆಯಾಗಿತ್ತು. ಕೊಲೆಗೈದು ಲಿಂಗದಹಳ್ಳಿ ಬಳಿ ಶವ ಬಿಸಾಕಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾರು ಚಾಲಕ ಯಶ್ವವಂತ್ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Related Articles

Back to top button