Latest

ಹಿಜಾಬ್ ವಿವಾದ; ಮುಸ್ಕಾನ್ ಳಿಗೆ ಮಹಾರಾಷ್ಟ್ರ ಶಾಸಕರಿಂದ ಭರ್ಜರಿ ಗಿಫ್ಟ್

ಮಂಡ್ಯ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ ಸಂದರ್ಭದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಳಿಗೆ ಮುಸ್ಲೀಂ ನಾಯಕರಿಂದ ಉಡುಗೊರೆಗಳು ಮಹಾಪೂರವೇ ಹರಿದು ಬರುತ್ತಿವೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಏರ್ಪಟ್ಟಿದ್ದ ವೇಳೆ ಮಂಡ್ಯ ಜಿಲ್ಲೆಯ ಪಿಇಎಸ್ ಪದವಿ ಪೂರ್ವ ಕಾಲೇಜಿನಲ್ಲಿಯೂ ಸಂಘರ್ಷ ಏರ್ಪಟ್ತಿತ್ತು. ಈ ವೇಳೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ಜೈಶ್ರೀರಾಮ್ ಘೋಷಣೆ ಕೂಗಿದರೆ, ಮುಸ್ಲೀಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ವೇಳೆ ಕಾಲೇಜು ಕಾಂಪಸ್ ನಲ್ಲಿ ವಿದ್ಯಾರ್ಥಿನಿ ಮುಸ್ಕಾನ್ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಳು.

Related Articles

ಇದೀಗ ವಿದ್ಯಾರ್ಥಿನಿ ಧೈರ್ಯ ಮೆಚ್ಚಿ ಮುಸ್ಲೀಂ ನಾಯಕರು ಉಡುಗೊರೆ ನೀಡುತ್ತಿದ್ದಾರೆ. ಮುಸ್ಕಾನ್ ಳಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿತ್ತು. ಇದರ ಬೆನ್ನಲ್ಲೇ ಕಾರ್ಪೊರೇಟರ್ ಇಮ್ರಾನ್ ಪಾಷಾ ಕೂಡ ಮುಸ್ಕಾನ್ ಗೆ 1 ಲಕ್ಷ ರೂಪಾಯಿ ನೀಡಿದ್ದಾರೆ.

ಇದೀಗ ಮಹಾರಾಷ್ಟ್ರದ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿಶಾನ್ ಸಿದ್ದಕಿ ಮಂಡ್ಯದ ಮುಸ್ಕಾನ್ ಮನೆಗೆ ಭೇಟಿ ನೀಡಿ ಐಫೋನ್, ಸ್ಮಾರ್ಟ್ ವಾಚ್ ಉಡುಗೊರೆ ನೀಡಿದ್ದಾರೆ.

ಇಲ್ಲಿನ ಗುತ್ತಲ ಬಡಾವಣೆಯಲ್ಲಿರುವ ಮುಸ್ಕಾನ್ ಳ ಮನೆಗೆ ಭೇಟಿ ನೀಡಿದ ಶಾಸಕ ಸಿದ್ದಕಿ, ಐ ಫೋನ್, ಸ್ಮಾರ್ಟ್ ವಾಚ್ ನೀಡಿದ್ದು, ಮುಸ್ಕಾನ್ ಘೋಷಣೆ ಕೂಗಿರುವುದು ಮಂಡ್ಯ ಮಾತ್ರವಲ್ಲ ಇಡೀ ಇಂಡಿಯಾದಲ್ಲೇ ಗರ್ವ ಎನಿಸುತ್ತಿದೆ. ಹಿಜಾಬ್ ಮುಸ್ಲೀಂ ಹೆಣ್ಣುಮಕ್ಕಳ ಹಕ್ಕಾಗಿದ್ದು, ಹೆಣ್ಣುಮಕ್ಕಳು ತಮ್ಮ ಹಕ್ಕಿಗೆ ಧೈರ್ಯದಿಂದ ಧ್ವನಿ ಎತ್ತುತ್ತಿರುವುದು ಸಂತಸದ ವಿಚಾರ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button