Kannada NewsKarnataka NewsUncategorized

ಗುರುವಾರ ನನ್ನ ನಿರ್ಧಾರ ಪ್ರಕಟ – ಲಕ್ಷ್ಮಣ ಸವದಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಬಾರಿಯ ಚುನಾವಣೆ ವಿಷಯವಾಗಿ ನನ್ನ ನಿರ್ಧಾರವನ್ನು ಗುರುವಾರ ಪ್ರಕಟಿಸುವುದಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಏ.13ರಂದು ಕ್ಷೇತ್ರದ ಜನರ ಸಭೆ ಕರೆದಿದ್ದೇನೆ. ಸಭೆಯಲ್ಲಿ ಜನರು ಮುಳುಗು ಎಂದರೆ ಮುಳುಗುತ್ತೇನೆ, ತೇಲು ಎಂದರೆ ತೇಲುತ್ತೇನೆ. ಸ್ಪರ್ಧೆ ಮಾಡು ಎಂದರೆ ಮಾಡುತ್ತೇನೆ, ಮನೆಯಲ್ಲಿರು ಎಂದರೆ ಮನೆಯಲ್ಲಿರುತ್ತೇನೆ ಎಂದು ಹೇಳಿದರು.

Home add -Advt

20 ವರ್ಷ ಕ್ಷೇತ್ರದ ಜನರು ನನ್ನ ಜೊತೆಗಿದ್ದಾರೆ. ನನ್ನನ್ನು ಉನ್ನತ ಮಟ್ಟಕ್ಕೆ ಏರಿಸಿದ್ದಾರೆ. ಹಾಗಾಗಿ ಕ್ಷೇತ್ರದ ಜನರು ಏನು ಹೇಳುತ್ತಾರೋ ಅದನ್ನು ಕೇಳುತ್ತೇನೆ ಎಂದು ಸವದಿ ತಿಳಿಸಿದರು.

https://pragati.taskdun.com/no-ticket-for-lakshmana-savadi-cm-bommai-hints/

Related Articles

Back to top button