Kannada NewsKarnataka NewsLatestPolitics

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ: ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ, ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ, ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡ್ತಾರೆ. ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಕಿಡಿಕಾರಿದರು.

*ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದರು.

*ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.‌ ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ+ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಹಿಂದಿನ ಬಾರಿಗಿಂತ ಹೆಚ್ಚು ಸೀಟು, ಮತ ಗಳಿಸಲು ಸಾದ್ಯವಾಗಲಿಲ್ಲ. ನಮಗೆ ಕಳೆದ ಲೋಕಸಭಾ ಚುನಾವಣೆಗಿಂತ ಶೇ13 ರಷ್ಟು ಮತಗಳನ್ನು ಈ ಚುನಾವಣೆಯಲ್ಲಿ ಹೆಚ್ಚು ಗಳಿಸಿದೆವು. ಇದರಿಂದ ಹತಾಶರಾಗಿ ಮತ್ತೆ ಜನರ ವಿಶ್ವಾಸ ಗಳಿಸಲು ತಪ್ಪು ದಾರಿಯಲ್ಲಿ ವಾಮ ಮಾರ್ಗ ಹಿಡಿದಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿ ಮುಂದುವರಿದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button