Kannada NewsKarnataka NewsNationalPolitics

NDA ಮೈತ್ರಿಕೂಟದಿಂದಲೇ ಮೈಸೂರು ಚಲೋ ಪಾದಯಾತ್ರೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಡೆಯಲಿರುವ ಪಾದಯಾತ್ರೆ NDA ಮೈತ್ರಿಕೂಟದ್ದಾಗಿರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಮೈತ್ರಿಕೂಟದ ರಾಜ್ಯ ನಾಯಕರ ಸಭೆಯ ಬಳಿಕ ಸಚಿವ ಜೋಶಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡರು.

Home add -Advt

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಪರಮಾವಧಿ ಖಂಡಿಸಿ ಶನಿವಾರ ನಡೆಸಲಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಜೆಡಿಎಸ್ ಕೂಡ ಭಾಗಿಯಾಗುತ್ತದೆ ಎಂದು ಹೇಳಿದರು.

ದೆಹಲಿಯಲ್ಲಿ ಇಂದು ನಡೆದ ಎನ್ ಡಿಎ ಮೈತ್ರಿಕೂಟದ ರಾಜ್ಯ ನಾಯಕರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

‘ಮೈಸೂರು ಚಲೋ’ ಪಾದಯಾತ್ರೆ ಕುರಿತ ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ, ರಾಜ್ಯ ಉಸ್ತುವಾರಿ ಅಗರವಾಲ್ RMD, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವರಾದ HD ಕುಮಾರಸ್ವಾಮಿ ಅವರೆಲ್ಲ  ಭಾಗಿಯಾಗಿ ಪಾದಯಾತ್ರೆ ಯಶಸ್ಸಿಗೆ ಚರ್ಚೆ ನಡೆಸಲಾಯಿತು ಎಂದು ಜೋಶಿ ತಿಳಿಸಿದರು.

LS����

Related Articles

Back to top button