Kannada NewsLatest
*ಲಂಚಕ್ಕೆ ಕೈಯೊಡ್ಡಿದಾಗಲೇ AEE ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ: ಸಾಲು ಸಾಲು ಅಧಿಕಾರಿಗಳು ಲೋಕಾಯುಕ್ತ ಬಲಗೆ ಬಿದ್ದಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದ ಬೆನ್ನಲ್ಲೇ ಮೈಸೂರಿನಲ್ಲಿ ಎಇಇ ಓರ್ವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮೈಸೂರು ಚೆಸ್ಕಾಂ ಎಇಇ ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ. ಗುತ್ತಿಗೆದಾರರ ನಸೀಂ ಎಂಬುವವರಿಂದ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಇಇ ದೀಪಕ್, ನಸೀಂ ಅವರಿಂದ 3 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.




