Karnataka NewsLatest

*ಮೈಸೂರು ದಸರಾ ಸಿದ್ಧತೆ ವೇಳೆಯೆ ನಾಡ ಬಾಂಬ್ ಸೇರಿದಂತೆ ಭಾರಿ ಸ್ಫೋಟಕ ಪತ್ತೆ*

ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲೇ ಮೈಸೂರಿನಲ್ಲಿ ಭಾರಿ ಸ್ಫೋಟಕ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತ ವ್ಯಕ್ತಿಗಳು ನೀಲಿ ಬಣ್ಣದ ಬ್ಯಾಗ್ ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ.

Home add -Advt

ಸ್ಫೋಟಕ ವಸ್ತುಗಳನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ, ಪೊಲೀಸ್ ಸಿಬ್ಬಂದಿ ಸ್ಫೋಟಕಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಫೋಟಕಗಳು ಹಾಗೂ ಒಂದು ನಾಡ ಬಾಂಬ್ ಆಕಾರದ ವಸ್ತು ಇರುವುದು ಪತ್ತೆಯಾಗಿದೆ. ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಹೊತ್ತಲ್ಲೇ ಸ್ಫೋಟಕ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

Related Articles

Back to top button