Latest

SSLC ಪರೀಕ್ಷೆ ಬರೆಯುತ್ತಲೇ ಸಾವನ್ನಪ್ಪಿದ ವಿದ್ಯಾರ್ಥಿನಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಎಸ್.ಎಸ್.ಎಲ್.ಸಿ.ಪರೀಕ್ಷೆ ವೇಳೆ ದುರಂತವೊಂದು ಸಂಭವಿಸಿದೆ. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಧಾರುಣ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತ ವಿದ್ಯಾರ್ಥಿನಿ. ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದಿತ್ತಿದ್ದ ವಿದ್ಯಾರ್ಥಿನಿ ಪರೀಕ್ಷೆ ಬರೆಯುತ್ತಿರುವಾಗಲೇ ಕೊನೆಯುಸಿರೆಳೆದಿದ್ದಾಳೆ. ಟಿ.ನರಸಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು – ಪುಣಾ ಮತ್ತೊಂದು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ; NH4ಕ್ಕೆ ಪರ್ಯಾಯ; ಕೇಂದ್ರದ ಬೃಹತ್ ಯೋಜನೆ

Home add -Advt

Related Articles

Back to top button