LatestWorld

ರತ್ನಖಚಿತ ಸಿಂಹಾಸನ ವೀಕ್ಷಣೆಗೆ ಲಭ್ಯ

ಪ್ರಗತಿವಾಹಿನಿ ಸುದ್ದಿ; ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿಯಿದೆ. ಶತಮಾನಗಳ ಇತಿಹಾಸ ಹೊಂದಿರುವ, ಮೈಸೂರು ರಾಜ ಮಹಾರಾಜರು ಬಳಸುತ್ತಿದ್ದ ವೈಭವೋಪೇತ, ರತ್ನಖಚಿತ ಸಿಂಹಾಸನವನ್ನು ನೋಡಲು ಇದೀಗ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ, ಜಂಬೂ ಸವಾರಿ ಅರಮನೆ ಮತ್ತು ಚಾಮುಂಡಿ ಬೆಟ್ಟಕ್ಕೆ ಮಾತ್ರ ಸೀಮಿತವಾಗಿರಲಿದೆ. ದಸರಾ ಮಹೋತ್ಸವ ಕೂಡ ತುಂಬಾ ಸರಳವಾಗಿ ಆಚರಿಸಲಾಗುತ್ತುದೆ. ಈ ಬಾರಿ ಅಧಿಕಮಾಸದ ಹಿನ್ನೆಲೆಯಲ್ಲಿ ಒಂದು ತಿಂಗಳ ಮುಂಚಿತವಾಗಿಯೇ ರಾಜರ ರತ್ನಖಚಿತ ಸಿಂಹಾಸನವನ್ನು ಜಿಲ್ಲಾಡಳಿತದ ಖಜಾನೆಯಿಂದ ತಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್ ನಲ್ಲಿ ಜೋಡಿಸಲಾಗಿದೆ. ಹೀಗಾಗಿ ಸಿಂಹಾಸನ ವೀಕ್ಷಣೆಗೆ ಕೂಡ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.

Home add -Advt

ಇನ್ನು ಸಿಂಹಾಸನ ಜೋಡಣೆ ಬೆನ್ನಲ್ಲೇ ಮೈಸೂರು ಅರಮನೆ ಪ್ರವೇಶಕ್ಕೆ ಶುಲ್ಕ ವಿಧಿಸಲಾಗಿದ್ದು, ವಯಸ್ಕರರಿಗೆ 70 ರೂ, ಮಕ್ಕಳಿಗೆ 35 ರೂ, ಸಿಂಹಾಸನ ವೀಕ್ಷಣೆಗೆ 50 ರೂ. ಶುಲ್ಕ ವಿಧಿಸಲಾಗಿದೆ.

Related Articles

Back to top button