Belagavi NewsBelgaum NewsKannada NewsKarnataka News

ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಬೆಳಗಾವಿಗೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಲಿದ್ದಾರೆ.

ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಳದ ಚಳಿಗಾಲದ ಅಧಿವೇಶನದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Home add -Advt

ಬೆಳಗ್ಗೆ 10.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ನೇರವಾಗಿ ಸುವರ್ಣ ವಿಧಾನ ಸೌಧಕ್ಕೆ ಆಗಮಿಸುವರು.

ವಿಧಾನಮಂಡಳದ ಉಭಯ ಸದನಗಳಲ್ಲಿ ಪಾಲ್ಗೊಳ್ಳಲಿರುವ ಅವರು ನಂತರ ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮೊದಲ ದಿನ ಅಧಿವೇಶನದಲ್ಲಿ ಪಾಲ್ಗೊಳ್ಳವುದು ತೆಲಂಗಾಣ ಚುನಾವಣೆ ಫಲಿತಾಂಶದ ಮೇಲೆ ಅವಲಂಭಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬಾರದಿದ್ದಲ್ಲಿ ಡಿ.ಕೆ.ಶಿವಕುಮಾರ ಅಲ್ಲಿಗೆ ತೆರಳುವ ಸಾಧ್ಯತೆ ಇದೆ.

Related Articles

Back to top button