Kannada NewsKarnataka NewsLatest

*ನಗರ ಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೆ ಕುಟುಂಬದ ನಾಲ್ವರನ್ನು ತಡರಾತ್ರಿ ಹತ್ಯೆಗೈದಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ.

ಮನೆಯಲ್ಲಿ ಮಲಗಿದ್ದವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ. ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಗೆ ಗದಗ ಜಿಲೆ ಬೆಚ್ಚಿ ಬಿದ್ದಿದೆ.

ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27) ಪರಶುರಾಮ (55), ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ನಾಲ್ವರನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದ ಪತಿ, ಪತ್ನಿ ಹಾಗೂ ಮಗಳನ್ನು ಕೊಲೆ ಮಾಡಲಾಗಿದೆ. ಏಪ್ರಿಲ್ 17ರಂದು ಕಾರ್ತಿಕ್ ಬಾಕಳೆಗೆ ಮದುವೆ ದಿನಾಂಕ ನಿಗದಿ ಮಾಡುವ ಕಾರ್ಯಕ್ರಮಕ್ಕೆಂದು ಸಂಬಂಧಿಕರು ಬಂದಿದ್ದರು. ಸಂಬಂಧಿಕರು ಹಾಗೂ ಕಾರ್ತಿಕ್ ನನ್ನು ನಾಲ್ವರನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.


Related Articles

Back to top button