Latest

ಸೋಮವಾರ ನಳೀನ್ ಕುಮಾರ ಕಟೀಲು ರಾಜಿನಾಮೆ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತಿರುವ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲು ಸೋಮವಾರ ರಾಜಿನಾಮೆ ನೀಡುವ ಸಾಧ್ಯತೆ ಇದೆ.

ಚುನಾವಣೆ ಫಲಿತಾಂಶವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಶನಿವಾರ ತಿಳಿಸಿದ್ದ ಕಟೀಲು, ಇದರ ಪೂರ್ಣ ಹೊಣೆಯನ್ನು ರಾಜ್ಯಾಧ್ಯಕ್ಷನಾಗಿ ನಾನು ಹೊರುವೆ ಎಂದಿದ್ದರು. ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಬೇರೆಯವರಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

https://pragati.taskdun.com/mallikarjuna-kharge-will-announce-cm-name/

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button