Kannada NewsKarnataka NewsLatest

*ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ನಿಲ್ದಾಣ ನಿಯಂತ್ರಕರ ಸಮಯ ಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಲಾಗಿದೆ. ಲೀಲಾವತಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಇಂದು ಮಧ್ಯಾಹ್ನ 12:30ರ ಸುಮಾರಿಗೆ ಮಹಿಳೆ ಮೆಟ್ರೋ ರೈಲು ಬತ್ರುತ್ತಿದ್ದಂತೆ ಮೆಟ್ರೋ ಹಳಿಗೆ ಜಿಗಿದ್ದಾಳೆ. ಕ್ಷಣಾರ್ಧದಲ್ಲಿ ನಿಲ್ದಾಣ ನಿಯಂತ್ರಕರು ಮಹಿಳೆಯನ್ನು ರಕ್ಷಿಸಿದ್ದಾರೆ.

Home add -Advt

ಸುರಕ್ಷತಾ ಕ್ರಮ ಅಳವಡಿಸಿ ಮಹಿಳೆಯನ್ನು ಮೆಟ್ರೋ ಹಳಿಯಿಂದ ಹೊರತೆಗೆಯಲಾಗಿದೆ. ಲೀಲಾವತಿ ಹೂವಿನ ವ್ಯಾಪಾರ ಮಾಡುತ್ತಿದ್ದರಂತೆ. ಸಾಲ ಮಾಡಿಕೊಂಡಿದ್ದರಂತೆ. ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು ಎನ್ನಲಾಗಿದೆ.

Related Articles

Back to top button