Kannada NewsKarnataka NewsNationalPolitics
*ಮಳೆ ಅಬ್ವರಕ್ಕೆ ಕೊಚ್ಚಿಕೊಂಡು ಹೋದ ಹೆದ್ದಾರಿ: ಕುಮಟಾ-ಶಿರಸಿ ರಸ್ತೆ ಸಂಪರ್ಕ ಕಡಿತ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮಳೆರಾಯ ಈಗಾಗಲೇ ಹಲವು ಕಡೆ ಹಲವು ಅವಾಂತರ ಸೃಷ್ಠಿಸಿದ್ದಾನೆ. ಮಳೆಯ ಅಬ್ಬರಕ್ಕೆ ಕಾರವಾರದ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿಕೊಂಡು ಹೋಗಿ ಕುಮಟಾ – ಶಿರಸಿ ರಸ್ತೆ ಸಂಪರ್ಕ ಕಡಿತವಾಗಿದೆ.
ಕಳೆದ ನಾಲ್ಕೈದು ದಿನದ ಹಿಂದೆ ಭಾರೀ ಮಳೆಯಿಂದಾಗಿ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿತ್ತು. ರಸ್ತೆ ಅಗಲೀಕರಣ ಹಿನ್ನಲೆ ಬಂಡೆ ಒಡೆದ ಪರಿಣಾಮ ಈ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿತ್ತು.
ರಾಷ್ಟ್ರೀಯ ಹೆದ್ದಾರಿ 766 E ನ ಹೆದ್ದಾರಿ ಕಾಮಗಾರಿಯ ಹಿನ್ನಲೆ ಅದರ ಪಕ್ಕದಲ್ಲೇ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿತ್ತು. ಇದೀಗ ಎಡೆಬಿಡದೆ ಮಳೆ ಸುರಿದ ಪರಿಣಾಮ ಬೆಣ್ಣೆ ಹೊಳೆ ಹಳ್ಳದ ನೀರು ಹರಿದು ಬಂದು ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ.