Kannada NewsKarnataka NewsNational

*ಕುಸಿದು ಬಿದ್ದು ಸಾವನ್ನಪ್ಪಿದ ರಾಷ್ಟ್ರ ಮಟದಲ್ಲಿ ಹೆಸರು ಮಾಡಿದ ಬಾಡಿ ಬಿಲ್ಡರ್*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದ ಯುವಕ ಜಿಮ್‌ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯ ಕೆಟಿಜೆ ನಗರದ ನಿವಾಸಿ  ಸುಶೀಲ್ (26) ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ. ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾ‌ನೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದ್ದು, ಸುಶೀಲ್ ನಿವಾಸದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ

Home add -Advt

ಸುಶೀಲ್ ಕುಮಾರ್ ಬಾಡಿ ಬಿಲ್ಡಿಂಗ್‌ನಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ. ಅಲ್ಲದೇ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬಾಡಿ ಬಿಲ್ಡಿಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದ. 

Related Articles

Back to top button