Election NewsKannada NewsKarnataka NewsNationalPolitics

ಕಮಲ ಬಿಟ್ಟು ‘ಕೈ’ ಹಿಡಿದ ಪ್ರಭಾವಿ ನಾಯಕ ನೆಹರು ಓಲೇಕಾರ್‌

ಪ್ರಗತಿವಾಹಿನಿ ಸುದ್ದಿ: ಚುನಾವಣಾ ಪ್ರಚಾರ ತಾರಕಕ್ಕೇರಿದ ಸಂದರ್ಭದಲ್ಲೇ ಹಾವೇರಿ ಮೀಸಲು ಕ್ಷೇತ್ರದ ಮಾಜಿ ಶಾಸಕ ನೆಹರು ಓಲೇಕಾರ್‌ ಕಾಂಗ್ರೆಸ್‌ ಸೇರಿದ್ದಾರೆ.

ಬುಧವಾರ ಮಧ್ಯಾಹ್ನ ಯಾದಗಿರಿಯಲ್ಲಿ ಅವರು ಬಿಜೆಪಿ ತೊರೆದು ‘ಕೈ’ ಪಾಳಯ ಸೇರ್ಪಡೆಯಾದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಮುನಿಸಿಕೊಂಡಿದ್ದ ಅವರು, ಯಾದಗಿರಿಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಬಾವುಟ ಹಿಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾ‌ರ್ ಅವರು ಓಲೇಕಾರ್‌ಗೆ ಪಕ್ಷದ ಬಾವುಟ ನೀಡಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button