*ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರು: ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವಂತೆ ಸಿಎಸ್ ಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ದೇಶಾದ್ಯಂತ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮಕ್ಕೆ‌ ಮುಂದಾಗಿದ್ದಾರೆ. ಭ್ರಷ್ಟಾಚಾರ, ಸೋಷಿಯಲ್ ಮೀಡಿಯಾ … Continue reading *ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರು: ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವಂತೆ ಸಿಎಸ್ ಗೆ ಸಿಎಂ ಸೂಚನೆ*