Kannada NewsKarnataka NewsLatest

*ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಂಗಳೂರಿನ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆಯಾಗಿವೆ. ಈ ಬಗ್ಗೆ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧ್ಯಕ್ಷರು ಸಾರ್ವಜನಿಕರ ಜೊತೆಗೂಡಿ ನೂರಾರು ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಅಂಚೆ ಇಲಾಖೆಯಿಂದ ಸರಿಯಾದ ವಿಳಾಸಕ್ಕೆ ಆಧಾರ್ ಕಾರ್ಡ್ ತಲುಪುತ್ತಿಲ್ಲವೆಂದು ಆರೋಪಿಸಿದ್ದಾರೆ.

Home add -Advt

ತಮ್ಮ ಕುಟುಂಬದವರ ಎಲ್ಲರ ಅಧಾರ್​​ ಕಾರ್ಡ್​​ ನದಿಯಲ್ಲಿ ಸಿಕ್ಕಿದೆ. ಗ್ರಾಮದ ನೂರಾರು ಜನರ ಕಾರ್ಡ್​ಗಳು ಸಹ ಇದರಲ್ಲಿವೆ. ಹಣ ಪಾವತಿಸಿ ವಿಳಾಸ, ಹೆಸರು ಬದಲಾವಣೆ ಮಾಡಿಸಿದವರು ಪರಿಷ್ಕೃತ ಕಾರ್ಡ್​​ ಈಗ ಬರಬಹುದು, ಆಗ ಬರಬಹುದು ಎಂದು ಕಾಯುತ್ತಿದ್ದರೆ ಅವೆಲ್ಲವೂ ಈಗ ನದಿ ನೀರಲ್ಲಿ ತೇಲಿಬರುತ್ತಿರೋದು ಕಂಡುಬಂದಿದೆ. ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಘಟನೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೆಕು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ಪತ್ತೆಯಾಗಿದ್ದು, ಆಧಾರ್ ಕಾರ್ಡ್‌ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು? ಮತ್ತು ಇದಕ್ಕೆ ಕಾರಣರಾದವರು ಯಾರೆಂಬುದನ್ನು ತನಿಖೆ ನಡೆಸಿ ಪತ್ತೆ ಹಚ್ಚಿ ತಮ್ಮ ಇಲಾಖೆಯ ಮುಖಾಂತರ ಕೂಡಲೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಯು.ಐ.ಡಿ.ಎ.ಐ ಯೋಜನಾ ವ್ಯವಸ್ಥಾಪಕರಿಗೆ ವಿಧಾನ ಸಭೆ ಸ್ಪೀಕರ್​​ ಮತ್ತು ಸ್ಥಳೀಯ ಶಾಸಕ ಯು.ಟಿ. ಖಾದರ್​​ ಸೂಚಿಸಿದ್ದಾರೆ.


Related Articles

Back to top button