Kannada NewsKarnataka NewsLatest

ಖಾನಾಪುರಕ್ಕೆ ಹೊಸ ಬಿಇಒ

ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಲಕ್ಷ್ಮಣರಾವ್ ಯಕ್ಕುಂಡಿ ಅಧಿಕಾರ ಸ್ವೀಕರಿಸಿದರು.

ಕಳೆದ ಅನೇಕ ತಿಂಗಳುಗಳಿಂದ ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸ್ಥಾನ ಖಾಲಿ ಇತ್ತು. ಈ ಹಿಂದೆ ಇದ್ದ ಶಿಕ್ಷಣಾಧಿಕಾರಿಗಳು ಧಾರವಾಡದ ಡೈಯಟ್ ಗೆ ವರ್ಗಾವಣೆಗೊಂಡ ನಂತರ  ಈ  ಸ್ಥಾನ ಭರ್ತಿಯಾಗದೆ  ಉಳಿದಿತ್ತು. ಕೆಲ ಸಮಯ ಪ್ರಭಾರಿಯಾಗಿ ಅಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಆದರೆ ಈಗ ಖಾಯಂ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಲಕ್ಷ್ಮಣರಾವ ಯಕ್ಕುಂಡಿ ಅವರನ್ನು ನೇಮಕ ಮಾಡಲಾಗಿದೆ.

Home add -Advt

ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಅವರು ಶಾಸಕಿ ಡಾ. ಅಂಜಲಿ ನಿಂಬಾಳ್ಕರ ಅವರನ್ನು ಭೇಟಿ ಮಾಡಿ, ಪರಿಚಯಿಸಿಕೊಂಡರು.

Related Articles

Back to top button